|
ದಿನಾಂಕ 26-11-2021 ರಂದು ಸಂವಿಧಾನ ದಿವನ್ನು ಆಚರಿಸಲಾಯಿತು. ಅಂದು ಮಕ್ಕಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಹೇಳಿಕೊಡಲಾಯಿತು. ಮಕ್ಕಳು ಮತ್ತು ಶಿಕ್ಷಕರು ಸಂವಿಧಾನ ದಿನದ ಕುರಿತು ಮಾತನಾಡಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
|
2021-22 ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಲಾ ಸಂಸತ್ತಿನ ರಾಷ್ಟ್ರಪತಿಗಳಾದ ಟಿ ಧನಂಜಯರವರು ವಿವಿಧ ಖಾತೆಗಳಿಗೆ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು |
|
2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳಿಗೆ ಸಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. |
|
ದಿನಾಂಕ 25-11-2021 ರಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಆರೋಗ್ಯ ಕೇಂದ್ರದ ವತಿಯಿಂದ ಮಕ್ಕಳಿಗೆ ಜಂತು ಹುಳು ನಿವಾರಣೆ ಕುರಿತು ಜಾಗೃತಿ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಎಲ್ಲ ಮಕ್ಕಳಿಗೆ ಜಂತು ಹುಳು ನಿವಾರಣೆಯ ಮಾತ್ರೆಗಳನ್ನು ಸಾಮೂಹಿಕವಾಗಿ ವಿತರಿಸಲಾಯಿತು...
|
|
ದಿನಾಂಕ 22-11-2021 ರಂದು ನಮ್ಮ ಶಾಲೆಯಲ್ಲಿ ದಾಸಶ್ರೇಷ್ಟ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು |
|
ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಸದಸ್ಯರಾಗಿದ್ದ ವಡ್ನಾಳ್ ಗ್ರಾಮದ ಶರಣ ಬಿ ಜಯಪ್ಪನವರು ದಿನಾಂಕ 16-11-2021 ರ ಮಂಗಳವಾರ ಅನಾರೋಗ್ಯದಿಂದ ನಿಧನರಾದರು. ಇವರ ನಿಧನಕ್ಕೆ ಶಾಲಾ ಸ್ಥಳೀಯ ಸಲಹಾ ಸಮಿತಿಯವರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸಿದರು. |
|
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು. |
|
ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಚನ್ನಗಿರಿ, ವಕೀಲರ ಸಂಘ ಚನ್ನಗಿರಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚನ್ನಗಿರಿ ತಾಲ್ಲೂಕು ಕೋರ್ಟ್ನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಕನ್ನಿಕ ಮೇಡಂ,ಸರ್ಕಾರಿ ಅಭಿಯೋಜಕರಾದ ಸರಿತಾ ಮೇಡಂ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್, ಚನ್ನಗಿರಿ ಉಪ ನಿರೀಕ್ಷಕರಾದ ಚಂದ್ರಶೇಖರ್ ಸರ್, ವಕೀಲರ ಸಂಘದ ಅಧ್ಯಕ್ಷರಾದ ರುದ್ರಪ್ಪನವರು ಸಮಾರಂಭದಲ್ಲಿ ಹಾಜರಿದ್ದರು. ಈ ಸಮಾರಂಭವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್ ಉದ್ಘಾಟಿಸಿದರೆ ಶಾಲಾ ಮುಖ್ಯೋಪಾಧ್ಯಾಯರಾದ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು... |
-
ಶ್ರೀ ಮದುಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 28ನೆಯ ಶ್ರದ್ಧಾಂಜಲಿ ಪ್ರಯುಕ್ತ ಭಕ್ತಿ ...
-
ದಿನಾಂಕ 28-10-2021 ರಂದು ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆ...
-
-
ಇಂದು ನಮ್ಮ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜಯಂತಿಯನ್ನು ಆಚರಿಸಲಾಯಿತು.
-
ಇಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕುಷ್ಟರೋಗ ವಿರೋದಿ ಮಾಸಾಚರಣೆ ಕಾರ್ಯವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸಿಬ್ಬಂದಿಗಳಾದ ವಿನ...
-
ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಶಾಲಾ ಪ್ರಾರಂಭೋತ್ಸವದ ವೀಡಿಯೋ ಶಾಲಾ ಕ್ರಿಯಾ ಯೋಜನೆ 2020-21. PDF 1. ವಿದ್ಯಾರ್ಥಿಗಳನ್ನು ಶಾಲೆಗೆ ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳುತ್ತಿರುವ ಶಿಕ್ಷಕ ವೃಂದ 2. ...