| ದಿನಾಂಕ 21-10-2021 ರಿಂದ ರಾಜ್ಯ ಸರ್ಕಾರದ ಆದೇಶದಂತೆ ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿ ಮದ್ಯಾಹ್ನದ ಬಿಸಿಯೂಟವನ್ನು ಪುನರಾರಂಭ ಮಾಡಲಾಯಿತು. ಅಂದು ಮಕ್ಕಳಿಗೆ ಸಿಹಿ ಊಟ ನೀಡಲಾಯಿತು. ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು |
| ದಿನಾಂಕ 02-10-2021 ರಂದು ನಮ್ಮ ಶಾಲೆಯಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ 29ನೆಯ ಶ್ರದ್ಧಾಂಜಲಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು |
| ನಮ್ಮ ಶಾಲೆಯಲ್ಲಿ 2020-21 ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿ ಮತ್ತು ಅತ್ಯುತ್ತಮ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಿ ಇದೇ ಕಾರ್ಯಕ್ರಮದಲ್ಲಿ ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಲಾಯಿತು. |
| ರಾಷ್ಟ್ರೀಯ ಪೋಷಣಾ ಸಪ್ತಾಹದ ಸಂದರ್ಭದಲ್ಲಿ ಮಕ್ಕಳು ವಿವಿಧ ಆಹಾರ ಧಾನ್ಯಗಳು ಮತ್ತು ತರಕಾರಿಗಳನ್ನು ಬಳಸಿ ಮಾನವನ ದೇಹದ ವಿವಿಧ ಅಂಗಾಂಗಗಳ ಚಿತ್ರ ರಚಿಸಿದ್ದು ಆಕರ್ಶಕವಾಗಿತ್ತು |
| ದಿನಾಂಕ 27-08-2021 ರಂದು ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸರಬರಾಜಾಗಿದ್ದ ಉಚಿತ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಯಿತು |
| ಶಾಲೆಯನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುತ್ತಿರುವುದು |
| ದಿನಾಂಕ 15-08-2021 ರಂದು ನಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯ್ತು ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಕೆ ಶಿವಲಿಂಗಪ್ಪನವರು ದ್ವಜಾರೋಹಣ ನೆರವೇರಿಸಿ ಮಾತನಾಡಿದರು |