ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Friday, November 12, 2021

ಕಾನೂನು ಅರಿವು-ನೆರವು ಕಾರ್ಯಕ್ರಮ

ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್‌ ಕಾ ಅಮೃತ್‌ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಚನ್ನಗಿರಿ, ವಕೀಲರ ಸಂಘ ಚನ್ನಗಿರಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚನ್ನಗಿರಿ ತಾಲ್ಲೂಕು ಕೋರ್ಟ್‌ನ ಸಿವಿಲ್‌ ನ್ಯಾಯಾಧೀಶರಾದ ಶ್ರೀಮತಿ ಕನ್ನಿಕ ಮೇಡಂ,ಸರ್ಕಾರಿ ಅಭಿಯೋಜಕರಾದ ಸರಿತಾ ಮೇಡಂ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್‌ ಕಾಲಿದ್ ಸರ್‌, ಚನ್ನಗಿರಿ ಉಪ ನಿರೀಕ್ಷಕರಾದ ಚಂದ್ರಶೇಖರ್‌ ಸರ್‌, ವಕೀಲರ ಸಂಘದ ಅಧ್ಯಕ್ಷರಾದ ರುದ್ರಪ್ಪನವರು ಸಮಾರಂಭದಲ್ಲಿ ಹಾಜರಿದ್ದರು. ಈ ಸಮಾರಂಭವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್‌ ಕಾಲಿದ್ ಸರ್‌ ಉದ್ಘಾಟಿಸಿದರೆ ಶಾಲಾ ಮುಖ್ಯೋಪಾಧ್ಯಾಯರಾದ ಧನಂಜಯ ಸರ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು...