ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Wednesday, December 1, 2021

ಕ್ಷೀರಭಾಗ್ಯ ಯೋಜನೆಯ ಪುನರಾರಂಭ ಮತ್ತು ಏಡ್ಸ್ ದಿನಾಚರಣೆ 01-12-2021

ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು.

ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು 

ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಶಾಲಾವಾಣಿ, ಮಾಸ ಪತ್ರಿಕೆ - ನವೆಂಬರ್ 2021

 'ಶಾಲಾವಾಣಿ' ಮಾಸ ಪತ್ರಿಕೆ- ನವೆಂಬರ್ 2021

 
ಇಂದು ನಮ್ಮ ಶಾಲೆಯ ಚೊಚ್ಚಲ ಮಾಸ ಪತ್ರಿಕೆ 'ಶಾಲಾವಾಣಿ' ಯನ್ನ ಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಧನಂಜಯ  ಬಿಡುಗಡೆ ಮಾಡಿದರು. ಇದು ಪ್ರತೀ ತಿಂಗಳು ಶಾಲೆಯಲ್ಲಿ ನಡೆದ ಚಟುವಟಿಕೆಗಳ ವರದಿ ಮತ್ತು ಮಕ್ಕಳ ಸೃಜನಶೀಲ ಬರಹಗಳಾದ ಕಥೆ, ಕವನ, ಡ್ರಾಯಿಂಗ್, ಲೇಖನ ಬರಹ, ಪ್ರಬಂಧ ಮುಂತಾದವುಗಳನ್ನು ಪ್ರಕಟಿಸಬೇಕೆಂಬ ಸದುದ್ದೇಶದಿಂದ ಹೊರಡಿಸಿದ ಪತ್ರಿಕೆಯಾಗಿದೆ....