 |
| ಇಂದು ಬೆಳಗ್ಗೆ 8:00 ಗಂಟೆಗೆ ಸರಿಯಾಗಿ ನಮ್ಮ ಶಾಲೆಯಲ್ಲಿ ಶಾಲಾ ಸ್ಥಳೀಯ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಶರಣ ಕೆ.ಎಂ ಈಶ್ವರಪ್ಪನವರು ಧ್ವಜಾರೋಹಣವನ್ನು ನೆರವೇರಿಸುವದರೊಂದಿಗೆ 73 ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಸ್ಥಳೀಯ ಸಲಹಾ ಸಮಿತಿಯ ಸದಸ್ಯರುಗಳು ಮತ್ತು ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆಯ ವೇಳೆಯಲ್ಲೇ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಶಿಕ್ಷಕರಾದ ಬಿ ಜಿ ಪ್ರಕಾಶ್ ರಾಷ್ಟ್ರೀಯ ಮತದಾರರ ದಿನದ ಕುರಿತು ಮಾತನಾಡಿದರು. ಎಲ್ಲ ಶಿಕ್ಷಕರು ಹಾಜರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನದ ಕುರಿತು ಮಾತನಾಡಿದರು. ಶಿಕ್ಷಕರಾದ ಬಿ ಜಿ ಪ್ರಕಾಶ್ ಮಾತನಾಡಿ ವಿವೇಕಾನಂದರ ಜೀವನ ಆದರ್ಶಗಳ ಕುರಿತು ಮಕ್ಕಳಿಗೆ ವಿವರವಾಗಿ ತಿಳಿಸಿದರು. ಮುಖ್ಯಶಿಕ್ಷಕಾದ ಟಿ ಧನಂಜಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ಚನ್ನಗಿರಿ ತಾಲ್ಲೂಕು ಪಶು ವೈದ್ಯಕೀಯ ಕೇಂದ್ರದ ವತಿಯಿಂದ ರೇಬಿಸ್ (ಹುಚ್ಚು ನಾಯಿ ಕಡಿತದಿಂದ ಬರುವ ರೋಗ) ಕುರಿತು ಜಾಗೃತಿ ಶಿಬಿರ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪಶು ವೈಧ್ಯಾಧಿಕಾರಿಗಳು ಮಕ್ಕಳಿಗೆ ರೇಬಿಸ್ ರೋಗಕ್ಕೆ ಕಾರಣ ಮತ್ತು ಅದು ಬರದಂತೆ ತಡೆಯಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. |
 |
| ಗೊಪ್ಪೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ನಮ್ಮ ಶಾಲೆಯ 15 ರಿಂದ 18 ವಯೋಮಾನದ 44 ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಲಾಯಿತು. ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಪಡೆದು ತಂದು ಲಸಿಕೆ ಹಾಕಿಸಿಕೊಂಡರು. |
 |
| ಸಾವಿತ್ರಿಬಾಯಿ ಪುಲೆ |
 |
| ಇಂದು ನಮ್ಮ ಶಾಲೆಯಲ್ಲಿ 2021-22 ನೇ ಸಾಲಿನ ಶಾಲಾ ಸಂಸತ್ತಿನ ಬಜೆಟ್ ನ್ನು ಶಾಲಾ ಸಂಸತ್ತಿನ ಹಣಕಾಸು ಮಂತ್ರಿಯಾದ ಕುಮಾರಿ ಹರ್ಷಿತ 9ನೇ ತರಗತಿ ಇವರು ಎಲ್ಲರ ಸಮ್ಮುಖದಲ್ಲಿ ಮಂಡಿಸಿದರು. ನಂತರ ಬಜೆಟ್ ಬಗೆಗೆ ಚರ್ಚೆಗೆ ಅವಕಾಶ ನೀಡಿ ಹಾಜರಿದ್ದ ಎಲ್ಲ ವಿದ್ಯಾರ್ಥಿಗಳ ಒಪ್ಪಗೆಯ ಮೇರೆಗೆ ಸಹಿಗಾಗಿ ರಾಷ್ಟ್ರಪತಿಗಳಿಗೆ ಸಲ್ಲಿಸಲಾಯಿತು. ರಾಷ್ಟ್ರಪತಿಗಳಾದ ಮುಖ್ಯಶಿಕ್ಷಕ ಟಿ ಧನಂಜಯ ಬಜೆಟ್ ಪ್ರತಿಗೆ ಸಹಿ ಹಾಕುವುದರೊಂದಿಗೆ ಅನುಮೋದನೆ ನೀಡಿದರು. |
 |
| ದಿನಾಂಕ 30-12-2021 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಬಗ್ಗೆ ಚರ್ಚಿಸಲು ಪೋಷಕರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ವಿದ್ಯಾರ್ಥಿಗಳ 3 ನೇ ರೂಪಣಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಕುರಿತು ಚರ್ಚಿಸಲಾಯಿತು. ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಮಕ್ಕಳು ಇನ್ನೂ ಹೆಚ್ಚಿನ ಅಂಕಗಳಿಸಲು ಶಿಕ್ಷಕರೊಂದಿಗೆ ಪೋಷಕರೂ ಮನೆಗಳಲ್ಲಿ ಓದಲು ಉತ್ತೇಜನ ನೀಡುವಂತೆ ಮನವೊಲಿಸಲಾಯ್ತು.... |
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.