ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Friday, November 12, 2021

ಕಾನೂನು ಅರಿವು-ನೆರವು ಕಾರ್ಯಕ್ರಮ

ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್‌ ಕಾ ಅಮೃತ್‌ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಚನ್ನಗಿರಿ, ವಕೀಲರ ಸಂಘ ಚನ್ನಗಿರಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚನ್ನಗಿರಿ ತಾಲ್ಲೂಕು ಕೋರ್ಟ್‌ನ ಸಿವಿಲ್‌ ನ್ಯಾಯಾಧೀಶರಾದ ಶ್ರೀಮತಿ ಕನ್ನಿಕ ಮೇಡಂ,ಸರ್ಕಾರಿ ಅಭಿಯೋಜಕರಾದ ಸರಿತಾ ಮೇಡಂ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್‌ ಕಾಲಿದ್ ಸರ್‌, ಚನ್ನಗಿರಿ ಉಪ ನಿರೀಕ್ಷಕರಾದ ಚಂದ್ರಶೇಖರ್‌ ಸರ್‌, ವಕೀಲರ ಸಂಘದ ಅಧ್ಯಕ್ಷರಾದ ರುದ್ರಪ್ಪನವರು ಸಮಾರಂಭದಲ್ಲಿ ಹಾಜರಿದ್ದರು. ಈ ಸಮಾರಂಭವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್‌ ಕಾಲಿದ್ ಸರ್‌ ಉದ್ಘಾಟಿಸಿದರೆ ಶಾಲಾ ಮುಖ್ಯೋಪಾಧ್ಯಾಯರಾದ ಧನಂಜಯ ಸರ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು...






Monday, November 8, 2021

ಮಾತಾಡ್‌ ಮಾತಾಡ್‌ ಕನ್ನಡ


ದಿನಾಂಕ 28-10-2021 ರಂದು ಮಾತಾಡ್‌ ಮಾತಾಡ್‌ ಕನ್ನಡ ಕಾರ್ಯಕ್ರಮದ ಅಂಗವಾಗಿ ಕನ್ನಡ ತಾಯಿ ಭುವನೇಶ್ವರಿ ಪೋಟೋ ಜೊತೆಗೆ ಕನ್ನಡ ಘೋಷಣೆಗಳನ್ನು ಹಿಡಿದು ಊರಿನಲ್ಲಿ ಜಾಥಾ ನಡೆಸಲಾಯಿತಿ. ನಂತರ ಶಾಲಾ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂರು ಕನ್ನಡ ಹಾಡುಗಳನ್ನು ಸಾಮೂಹಿಕವಾಗಿ ಹಾಡಲಾಯಿತು.

ದಿನಾಂಕ 21-10-2021 ರಿಂದ ರಾಜ್ಯ ಸರ್ಕಾರದ ಆದೇಶದಂತೆ ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿ ಮದ್ಯಾಹ್ನದ ಬಿಸಿಯೂಟವನ್ನು ಪುನರಾರಂಭ ಮಾಡಲಾಯಿತು. ಅಂದು ಮಕ್ಕಳಿಗೆ ಸಿಹಿ ಊಟ ನೀಡಲಾಯಿತು. ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಹಾಜರಿದ್ದರು


ದಿನಾಂಕ 14-10-2021 ರಂದು ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾಗಿದ್ದ ಶರಣ ಕೆ ಶಿವಲಿಂಗಪ್ಪನವರು, ಕಂಚಿಗನಹಾಳ್‌ ಇವರು ಕಡಿಮೆ ರಕ್ತದೊತ್ತಡ (Low BP) ದಿಂದ ಲಿಂಗೈಕ್ಯರಾಗಿರುತ್ತಾರೆ. ಇವರು ಚನ್ನಗಿರಿ ಸಾದು ವೀರಶೈವ ಸಮಾಜದ ಅಧ್ಯಕ್ಷರೂ ಆಗಿದ್ದರು. ಇವರ ಅನಿರೀಕ್ಷಿತ ನಿಧನಕ್ಕೆ ಶಾಲಾ ಸ್ಥಳೀಯ ಸಲಹಾ ಸಮಿತಿಯ ಎಲ್ಲ ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿರುತ್ತಾರೆ.

ದಿನಾಂಕ 02-10-2021 ರಂದು ನಮ್ಮ ಶಾಲೆಯಲ್ಲಿ ಗಾಂಧೀ ಜಯಂತಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಮತ್ತು ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ 29ನೆಯ ಶ್ರದ್ಧಾಂಜಲಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ನಮ್ಮ ಶಾಲೆಯಲ್ಲಿ  2020-21 ನೇ ಸಾಲಿನ ಅತ್ಯುತ್ತಮ ವಿದ್ಯಾರ್ಥಿ ಮತ್ತು ಅತ್ಯುತ್ತಮ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಿ ಇದೇ ಕಾರ್ಯಕ್ರಮದಲ್ಲಿ ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಲಾಯಿತು. 
ದಿನಾಂಕ 24-09-2021 ರಂದು ನಮ್ಮ ಶಾಲೆಯಲ್ಲಿ  ಹಿರಿಯ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 29ನೆಯ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಿರಿಯ ಜಗದ್ಗುರುಗಳ ಜೀವನ ಮತ್ತು ಸಾಧನೆಯ ಕುರಿತು ಮಾತನಾಡಿದರು.
ದಿನಾಂಕ 23-09-2021 ರಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಪೋಷಣಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಚನ್ನಗಿರಿಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಯುತ ಲಿಂಗಪ್ಪನವರು ಭಾಗವಹಿಸಿ ಮಕ್ಕಳಿಗೆ ಪೋಷಣಾ ಸಪ್ತಾಹದ ಉದ್ದೇಶ ಮತ್ತು ಆಹಾರ ಪದ್ದತಿಯ ಕುರಿತು ಮಾಹಿತಿ ನೀಡಿದರು

ರಾಷ್ಟ್ರೀಯ ಪೋಷಣಾ ಸಪ್ತಾಹದ ಸಂದರ್ಭದಲ್ಲಿ ಮಕ್ಕಳು ವಿವಿಧ ಆಹಾರ ಧಾನ್ಯಗಳು ಮತ್ತು ತರಕಾರಿಗಳನ್ನು ಬಳಸಿ ಮಾನವನ ದೇಹದ ವಿವಿಧ ಅಂಗಾಂಗಗಳ ಚಿತ್ರ ರಚಿಸಿದ್ದು ಆಕರ್ಶಕವಾಗಿತ್ತು
ದಿನಾಂಕ 27-08-2021 ರಂದು  ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸರಬರಾಜಾಗಿದ್ದ ಉಚಿತ ಪಠ್ಯಪುಸ್ತಕಗಳನ್ನು ವಿತರಣೆ ಮಾಡಲಾಯಿತು
ಶಾಲೆಯನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡುತ್ತಿರುವುದು
ದಿನಾಂಕ 15-08-2021 ರಂದು ನಮ್ಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯ್ತು ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಕೆ ಶಿವಲಿಂಗಪ್ಪನವರು ದ್ವಜಾರೋಹಣ ನೆರವೇರಿಸಿ ಮಾತನಾಡಿದರು


Friday, September 17, 2021

ವಿಶ್ವ ಓಝೋನ್ ದಿನಾಚರಣೆ

ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು

 

Sunday, September 5, 2021

ಶಿಕ್ಷಕರ ದಿನಾಚರಣೆ 05-09-2021

 



ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ "ಮುಖ್ಯಮಂತ್ರಿ ರೈತ ವಿದ್ಯಾ ನಿಧಿ" ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರವನ್ನು ನಮ್ಮ ಶಾಲೆಯ ಶ್ರೀ ಶಿವಕುಮಾರ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು.

Tuesday, August 31, 2021

ಶಾಲಾ ಪ್ರಾರಂಭೋತ್ಸವ 23-08-2021

ಶಾಲಾ ಆವರಣ ಸ್ವಚ್ಚಗೊಳಿಸಿರುವುದು

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಚೌಕಗಳನ್ನು ಹಾಕಿರುವುದು

ಥರ್ಮಲ್‌ ಸ್ಕ್ಯಾನಿಂಗ್ , ಸ್ಯಾನಿಟೈಸ್‌ನೊಂದಿಗೆ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಲಾಯಿತು

ವಿದ್ಯಾರ್ಥಿಗಳಂದ ಒಪ್ಪಿಗೆ ಪತ್ರ ಪಡೆದುಕೊಳ್ಳುತ್ತಿರುವುದು

ಸಾಮಾಜಿಕ ಅಂತರದೊಂದಿಗೆ ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳು

 

Wednesday, April 14, 2021

ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ 14-04-2021

ಇಂದು ನಮ್ಮ ಶಾಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 130ನೇ ಜಯಂತಿಯನ್ನು ಆಚರಿಸಲಾಯಿತು.

Monday, April 5, 2021

ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆ 05-04-2021

 

ಇಂದು ನಮ್ಮ ಶಾಲೆಯಲ್ಲಿ ಬಾಬು ಜಗಜೀವನ್ ರಾಮ್ ರವರ 114 ನೇ ಜಯಂತಿಯನ್ನು ಆಚರಿಸಲಾಯಿತು.


Monday, March 8, 2021

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 08-03-2021

 

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 


ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀಮತಿ ಜಿ ಶಾರದ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಶಾಲೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು

ರಾಷ್ಟ್ರೀಯ ವಿಜ್ಞಾನ ದಿನಾಚರಣೆ 28-02-2021

 

ರಾಷ್ತ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯ ವಿಜ್ಞಾನ ಶಿಕ್ಷಕರಾದ ಶ್ರೀ ಡಿ ಯೋಗೇಂದ್ರಪ್ಪ ಇವರು ಮಕ್ಕಳಿಗೆ ವಿಜ್ಞಾನ ಪ್ರಯೋಗಗಳನ್ನು ಮಾಡಿ ತೋರಿಸುವ ಮೂಲಕ ಮಕ್ಕಳಲ್ಲಿ ವಿಜ್ಞಾನದ ಬಗೆಗೆ ಕುತೂಲಹ ಮೂಡಿಸಿದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ವಿಜ್ಞಾನ ಪಠ್ಯಪುಸ್ತಕದಲ್ಲಿ ಬರುವ ಚಿತ್ರಗಳ ರಂಗೋಲಿ ಹಾಕಿದ್ದು ಆಕರ್ಷಕವಾಗಿತ್ತು.