 |
| ಇಂದು ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಕೆನೆಭರಿತ ಬಿಸಿಹಾಲು ವಿತರಿಸುವ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಪುನರಾರಂಭ ಮಾಡಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರೂ ಹಾಜರಿದ್ದರು. |
 |
| ಇಂದು ನಮ್ಮ ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಏಡ್ಸ್ ದಿನಾಚರಣೆಯ ಹಿನ್ನೆಲೆ, ರೋಗ ಲಕ್ಷಣ, ಹೆಚ್.ಐ.ವಿ ವೈರಸ್ ಕುರಿತು ಮಾತನಾಡಿದರು |
 |
| ಶಿಕ್ಷಕರಾದ ಟಿ ಕೆ ಶಿವಕುಮಾರ್ ಏಡ್ಸ್ ಹರಡುವ ಬಗೆಯನ್ನು ವಿವರಿಸಿದರು. ಮುಖ್ಯಶಿಕ್ಷಕರಾದ ಟಿ. ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
 |
| 'ಶಾಲಾವಾಣಿ' ಮಾಸ ಪತ್ರಿಕೆ- ನವೆಂಬರ್ 2021 |
 |
| ಇಂದು ನಮ್ಮ ಶಾಲೆಯ ಚೊಚ್ಚಲ ಮಾಸ ಪತ್ರಿಕೆ 'ಶಾಲಾವಾಣಿ' ಯನ್ನ ಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಧನಂಜಯ ಬಿಡುಗಡೆ ಮಾಡಿದರು. ಇದು ಪ್ರತೀ ತಿಂಗಳು ಶಾಲೆಯಲ್ಲಿ ನಡೆದ ಚಟುವಟಿಕೆಗಳ ವರದಿ ಮತ್ತು ಮಕ್ಕಳ ಸೃಜನಶೀಲ ಬರಹಗಳಾದ ಕಥೆ, ಕವನ, ಡ್ರಾಯಿಂಗ್, ಲೇಖನ ಬರಹ, ಪ್ರಬಂಧ ಮುಂತಾದವುಗಳನ್ನು ಪ್ರಕಟಿಸಬೇಕೆಂಬ ಸದುದ್ದೇಶದಿಂದ ಹೊರಡಿಸಿದ ಪತ್ರಿಕೆಯಾಗಿದೆ.... |
 |
| ದಿನಾಂಕ 26-11-2021 ರಂದು ಸಂವಿಧಾನ ದಿವನ್ನು ಆಚರಿಸಲಾಯಿತು. ಅಂದು ಮಕ್ಕಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಹೇಳಿಕೊಡಲಾಯಿತು. ಮಕ್ಕಳು ಮತ್ತು ಶಿಕ್ಷಕರು ಸಂವಿಧಾನ ದಿನದ ಕುರಿತು ಮಾತನಾಡಿದರು. ಮುಖ್ಯಶಿಕ್ಷಕರಾದ ಟಿ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. |
 |
| 2021-22 ನೇ ಸಾಲಿನ ಶಾಲಾ ಸಂಸತ್ತು ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಲಾ ಸಂಸತ್ತಿನ ರಾಷ್ಟ್ರಪತಿಗಳಾದ ಟಿ ಧನಂಜಯರವರು ವಿವಿಧ ಖಾತೆಗಳಿಗೆ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು |
 |
| 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳಿಗೆ ಸಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. |
 |
ದಿನಾಂಕ 25-11-2021 ರಂದು ನಮ್ಮ ಶಾಲೆಯಲ್ಲಿ ಗೊಪ್ಪೇನಹಳ್ಳಿ ಆರೋಗ್ಯ ಕೇಂದ್ರದ ವತಿಯಿಂದ ಮಕ್ಕಳಿಗೆ ಜಂತು ಹುಳು ನಿವಾರಣೆ ಕುರಿತು ಜಾಗೃತಿ ಮಾಡಿಸಲಾಯಿತು. ಇದೇ ಸಂದರ್ಭದಲ್ಲಿ ಎಲ್ಲ ಮಕ್ಕಳಿಗೆ ಜಂತು ಹುಳು ನಿವಾರಣೆಯ ಮಾತ್ರೆಗಳನ್ನು ಸಾಮೂಹಿಕವಾಗಿ ವಿತರಿಸಲಾಯಿತು...
|
 |
| ದಿನಾಂಕ 22-11-2021 ರಂದು ನಮ್ಮ ಶಾಲೆಯಲ್ಲಿ ದಾಸಶ್ರೇಷ್ಟ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು |
 |
| ನಮ್ಮ ಶಾಲೆಯ ಸ್ಥಳೀಯ ಸಲಹಾ ಸಮಿತಿಯ ಸದಸ್ಯರಾಗಿದ್ದ ವಡ್ನಾಳ್ ಗ್ರಾಮದ ಶರಣ ಬಿ ಜಯಪ್ಪನವರು ದಿನಾಂಕ 16-11-2021 ರ ಮಂಗಳವಾರ ಅನಾರೋಗ್ಯದಿಂದ ನಿಧನರಾದರು. ಇವರ ನಿಧನಕ್ಕೆ ಶಾಲಾ ಸ್ಥಳೀಯ ಸಲಹಾ ಸಮಿತಿಯವರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿ ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸಿದರು. |
 |
| ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು. |
 |
| ದಿನಾಂಕ : 12-11-2021 ರಂದು ನಮ್ಮ ಶಾಲೆಯಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ಅಜಾದ್ ಕಾ ಅಮೃತ್ ಮಹೋತ್ಸವ ಆಚರಣೆ ಪ್ರಯುಕ್ತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಚನ್ನಗಿರಿ, ವಕೀಲರ ಸಂಘ ಚನ್ನಗಿರಿ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚನ್ನಗಿರಿ ತಾಲ್ಲೂಕು ಕೋರ್ಟ್ನ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಕನ್ನಿಕ ಮೇಡಂ,ಸರ್ಕಾರಿ ಅಭಿಯೋಜಕರಾದ ಸರಿತಾ ಮೇಡಂ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್, ಚನ್ನಗಿರಿ ಉಪ ನಿರೀಕ್ಷಕರಾದ ಚಂದ್ರಶೇಖರ್ ಸರ್, ವಕೀಲರ ಸಂಘದ ಅಧ್ಯಕ್ಷರಾದ ರುದ್ರಪ್ಪನವರು ಸಮಾರಂಭದಲ್ಲಿ ಹಾಜರಿದ್ದರು. ಈ ಸಮಾರಂಭವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮಹಮ್ಮದ್ ಕಾಲಿದ್ ಸರ್ ಉದ್ಘಾಟಿಸಿದರೆ ಶಾಲಾ ಮುಖ್ಯೋಪಾಧ್ಯಾಯರಾದ ಧನಂಜಯ ಸರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಲಾಯಿತು... |
 |
| ದಿನಾಂಕ 16-09-2021 ರಂದು ವಿಶ್ವ ಓಝೋನ್ ದಿನಾಚರಣೆಯನ್ನು ಆಚರಿಸಲಾಯಿತು, ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪರವರು ಮಕ್ಕಳಿಗೆ ಓಝೋನ್ ಪದರದ ಕುರಿತು ವಿವರಿಸಿದರು |
 |
| ದಿನಾಂಕ : 05-09-2021 ರಂದು ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ರೈತ ಸಂಪರ್ಕ ಕೇಂದ್ರ ಪಾಂಡೋಮಟ್ಟಿ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ "ಮುಖ್ಯಮಂತ್ರಿ ರೈತ ವಿದ್ಯಾ ನಿಧಿ" ಲೋಕಾರ್ಪಣೆ ಕಾರ್ಯಕ್ರಮದ ನೇರಪ್ರಸಾರವನ್ನು ನಮ್ಮ ಶಾಲೆಯ ಶ್ರೀ ಶಿವಕುಮಾರ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. |
-
ಇಂದು ನಮ್ಮ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು
-
-
ನಮ್ಮ ಶಾಲಾ ಕುಟುಂಬದ ಎಲ್ಲ ಸದಸ್ಯರಿಗೆ, ಶಾಲಾ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಮತ್ತು ಶಾಲೆಯ ಎಲ್ಲಾ ಪ್ರೀತಿಯ ವಿದ್ಯಾರ...
-
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 03-03-2021 ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಗೊಪ್ಪೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ...
-
-
-
ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶರಣ ಕೆ ಶಿವಲಿಂಗಪ್ಪನವರಿಂದ ಶಾಲಾ ಕಿರುಚಿತ್ರ ಬಿಡುಗಡೆ ಗಣರಾಜ್ಯೋತ್ಸವ ಆಚರಣೆ 26-01-2021 ಶಾಲೆಯ ಪ್ರವೇಶ ದ್ವಾರದ ನೋಟ
-
ಇಂದು ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಚರ್ಚಿಸಲಾಯಿತು.